ಸಿಡ್ನಿ ಟೆಸ್ಟ್ ನಲ್ಲಿ ಹನುಮ ವಿಹಾರಿ ಕ್ರಿಕೆಟ್‌ನ ಕೊಲೆ ಮಾಡಿದ್ದಾರೆ: ಬಿಜೆಪಿ ಸಂಸದ ಬಾಬುಲ್ ಸುಪ್ರಿಯೊ


ನವದೆಹಲಿ: ಸಿಡ್ನಿ ಟೆಸ್ಟ್ ನಲ್ಲಿ ಭಾರತ ತಂಡದ ಕ್ರಿಕೆಟಿಗ ಹನುಮ ವಿಹಾರಿ ಕ್ರಿಕೆಟ್ ನ ಕೊಲೆ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೊ ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸುಪ್ರಿಯೋ ಅವರು, ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯ ಮೂರನೇ ಪಂದ್ಯ ಡ್ರಾ ಮೂಲಕ ಕೊನೆಯಾಗಿದೆ. ಸಿಡ್ನಿಯಲ್ಲಿ ಸೋಮವಾರ ನಡೆದ ಐದನೇ ದಿನದಾಟದಲ್ಲಿ ಭಾರತ ತಂಡ ಟೆಸ್ಟ್ ಡ್ರಾ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಸುದೀರ್ಘ ಓವರ್ ಎದುರಿಸಿದ ಹನುಮ ವಿಹಾರಿ, ಕ್ರಿಕೆಟ್ ಅನ್ನು ಕೊಲೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

'ಭಾರತ ತಂಡಕ್ಕೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಗೆಲುವಿನ ಅವಕಾಶವಿದ್ದರೂ, 109 ಎಸೆತ ಎದುರಿಸಿದ ವಿಹಾರಿ ಕೇವಲ 7 ರನ್ ಗಳಿಸಿ ಕ್ರಿಕೆಟ್‌ನ ಕೊಲೆ ಮಾಡಿದ್ದಾರೆ. ಅಂತೆಯೇ ನನಗೆ ಕ್ರಿಕೆಟ್ ಬಗ್ಗೆ ಏನೂ ತಿಳಿದಿಲ್ಲ ಎಂದೂ ಹೇಳಿರುವ ಸುಪ್ರಿಯೋಗೆ ಟ್ವೀಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಹನುಮ ವಿಹಾರಿ ಮತ್ತು ಟೆಸ್ಟ್ ಪಂದ್ಯದ ಕುರಿತು ಏನೂ ಅರಿಯದ ನೀವು ದಯವಿಟ್ಟು ರಾಜಕೀಯದಲ್ಲೇ ಇರಿ ಎಂದು ಸಲಹೆ ನೀಡಿದ್ದಾರೆ.

Post a Comment

0 Comments